ವಿಮಾನ ನಿಲ್ದಾಣದ ಆವರಣದಲ್ಲಿಯೇ ಬಿಜೆಪಿ ಸಭೆ ನಡೆಸಿದ ಅಮಿತ್ ಶಾ

ಭಾನುವಾರ, 2 ಜುಲೈ 2017 (15:47 IST)
ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸಮ್ಮುಖದಲ್ಲಿಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಿಮಾನ ನಿಲ್ದಾ ಣದಲ್ಲಿಯೇ ಬಿಜೆಪಿ ಸಭೆ ನಡೆಸಿರುವುದು ಅಧಿಕಾರದ ದುರುಪಯೋಗ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
 
ಗೋವಾ ವಿಮಾನ ನಿಲ್ದಾಣದ ಆವರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವುದು ಅಧಿಕಾರದ ದುರ್ಬಳಕೆ ಎಂದು ಕಾಂಗ್ರೆಸ್ ಮುಖಂಡ ಗಿರೀಶ್ ಚೋಡನ್‌ಕರ್ ಕಿಡಿಕಾರಿದ್ದಾರೆ.
 
ರಾಜ್ಯದಲ್ಲಿ ಅಡಳಿತರೂಢವಾಗಿರುವ ಬಿಜೆಪಿ ಪಕ್ಷ, ಅಧಿಕಾರವಧಿಯಲ್ಲಿ ಉತ್ತಮ ಉದಾಹರಣೆ ನೀಡುವಂತಹ ಯಾವುದೇ ಕಾರ್ಯ ಮಾಡಿಲ್ಲ. ವಿಮಾನ ನಿಲ್ದಾಣದ ಅಧಿಕಾರಿಗಳು ಅಮಿತ್ ಶಾ ಸಭೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
 
ಎರಡು ದಿನಗಳ ಭೇಟಿಗಾಗಿ ಗೋವಾಗೆ ಆಗಮಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ