ಮುಂದಿನ ವಾರ ಅಲಹಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವುದರಿಂದ ಅಂದಿನಿಂದಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರಪ್ರದೇಶದ ಚುನಾವಣೆ ಪ್ರಚಾರ ಉದ್ಘಾಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ದಲಿತರ ವಿಷಯದ ಕುರಿತಂತೆ ಮಾತನಾಡಿದ ಅವರು, ಸಮಾಜವಾದಿ ಪಕ್ಷ ದಲಿತರ ಮೇಲೆ ಶೋಷಣ ನಡೆಸಿದೆ. ಬಿಎಸ್ಪಿ ಪಕ್ಷ ದಲಿತರನ್ನು ಬಳಸಿಕೊಂಡಿದೆ. ದಲಿತರ ಏಳಿಗೆಗಾಗಿ ಏನಾದರೂ ಮಾಡುವುದಾದರೇ ಅದು ಬಿಜೆಪಿ ಪಕ್ಷ ಮಾತ್ರ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.