ದೇಶವನ್ನು ಒಡೆಯುವಂತಹ ಹೇಳಿಕೆ ನೀಡಿದವರಿಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ನೀಡುತ್ತಿದ್ದು, ದೇಶದ ಯುವಕರು ಮುಂಬರುವ ದಿನಗಳಲ್ಲಿ ಅವರಿಗೆ ಸೂಕ್ತ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಜೆಎನ್ಯು ವಿವಾದದ ಬಗ್ಗೆ ಬಹಿರಂಗವಾಗಿ ಸ್ಪಷ್ಟೀಕರಣ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒತ್ತಾಯಿಸಿದ್ದಾರೆ.