ಅಮಿತ್ ಶಾ ಚುನಾವಣಾ ಫೋಬಿಯಾದಿಂದ ಬಳಲುತ್ತಿದ್ದಾರೆ: ರಾವತ್

ಮಂಗಳವಾರ, 28 ಜೂನ್ 2016 (18:26 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪ್ರಖರ ವಾಗ್ದಾಳಿ ನಡೆಸಿರುವ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್, ಶಾ ಚುನಾವಣಾ ಭಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. 
 
ಡೆಹ್ರಾಡೂನ್‌ನಲ್ಲಿ ವರದಿಗಾರರೊಂದಿಗೆ ಮಾತನ್ನಾಡುತ್ತಿದ್ದ ಅವರು ಅಮಿತ್ ಶಾ ಚುನಾವಣಾ ಫೋಬಿಯಾದಿಂದ ಬಳಲುತ್ತಿದ್ದಾರೆ ಎನ್ನಿಸುತ್ತಿದೆ. ಅದಕ್ಕಾಗಿ ಅವರು ಕುಟುಕು ಕಾರ್ಯಾಚರಣೆ ಮಾತುಗಳನ್ನಾಡುತ್ತಿದ್ದಾರೆ.ಸಾರ್ವಜನಿಕ ಹಿತದೃಷ್ಟಿಯ ಮಾತುಗಳು ಅವರ ಬಾಯಿಂದ ಬರುತ್ತಲೇ ಇಲ್ಲ ಎಂದು ಕುಟುಕಿದ್ದಾರೆ.
 
ಅವರ ಭಾಷಣದಲ್ಲಿ ರಾಜ್ಯ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಉಲ್ಲೇಖವೇ ಇರಲಿಲ್ಲ. ಕೇವಲ ಆಡಳಿತಾರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುವುದರಲ್ಲಿಯೇ ಅವರ ಮಾತು ಮುಗಿದು ಹೋಗಿತ್ತು. ಇದು ದುರಾದೃಷ್ಟಕರವಾದ ಸಂಗತಿ ಎಂದು ಅವರು ವ್ಯಂಗ್ಯವಾಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ