ಅನಾಥ ಬಾಲಕಿ ಮೇಲೆ ಆಶ್ರಮದಲ್ಲೇ ತಿಂಗಳುಗಳಿಂದ ಅತ್ಯಾಚಾರ!

ಬುಧವಾರ, 21 ಜೂನ್ 2023 (08:37 IST)
ಅಮರಾವತಿ : ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ 15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯೊಬ್ಬರನ್ನು ಬಂಧಿಸಲಾಗಿದೆ.
 

ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದು, ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು ದಾಖಲಿಸಿಕೊಂಡಿದ್ದರು. ಬಳಿಕ ಬಾಲಕಿ ವಿಜಯವಾಡ ತಲುಪಿ ಆಶ್ರಮದ ಸ್ವಾಮೀಜಿ ಪೂರ್ಣಾನಂದ ಸರಸ್ವತಿ ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಆಕೆ ಚಿಕ್ಕವಳಿದ್ದಾಗಲೇ ನಿಧನರಾಗಿದ್ದಾರೆ. ಬಳಿಕ ಆಕೆಯ ಅಜ್ಜಿ 2 ವರ್ಷಗಳ ಹಿಂದೆ ಆಶ್ರಮದಲ್ಲಿ ಅವಳನ್ನು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾಳೆ. ಕಳೆದ ಹಲವು ತಿಂಗಳುಗಳಿಂದ ಪೂರ್ಣಾನಂದ ಸರಸ್ವತಿ ತನಗೆ ಪದೇ ಪದೇ ಹಿಂಸೆ ನೀಡುತ್ತಿದ್ದರು ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿ ದೂರು ನೀಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ