ಟಿಕೆಟ್ ಕೈ ತಪ್ಪುವ ಭೀತಿ: ಸೈಲೆಂಟಾದ ಅನಂತಕುಮಾರ್ ಹೆಗಡೆ

Krishnaveni K

ಶುಕ್ರವಾರ, 22 ಮಾರ್ಚ್ 2024 (16:28 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದೆ ಎಂದಾಗ ವಿವಾದಾತ್ಮಕ ಹೇಳಿಕೆಗಳಿಂದ ಮುನ್ನಲೆಗೆ ಬಂದಿದ್ದ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಸೈಲಂಟಾಗಿದ್ದಾರೆ.
 

ಇತ್ತೀಚೆಗೆ ಕೆಲವು ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಿದ್ದ ಅನಂತಕುಮಾರ್ ಹೆಗಡೆ ಹೈಕಮಾಂಡ್ ಕೋಪಕ್ಕೂ ಗುರಿಯಾಗಿದ್ದರು. ಅದರಲ್ಲೂ ಅವರ ಸಂವಿಧಾನ ಬದಲಾಯಿಸುವ ಹೇಳಿಕೆಗೆ ಬಿಜೆಪಿ ಹೈಕಮಾಂಡ್ ಉತ್ತರ ಕೇಳಿ ನೋಟಿಸ್ ಜಾರಿ ಮಾಡಿತ್ತು.

ಇದರ ನಡುವೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಆಗಲೂ ಉತ್ತರ ಕನ್ನಡಕ್ಕೆ ಅಭ್ಯರ್ಥಿ ಘೋಷಣೆ ಮಾಡಿರಲಿಲ್ಲ. ಅಲ್ಲದೆ, ಕೆಲವೊಂದು ಮೂಲಗಳ ಪ್ರಕಾರ ವಿವಾದಗಳಿಂದ ಪಕ್ಷಕ್ಕೆ ಮುಜುಗರ ತರುತ್ತಿರುವ ಅನಂತಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಈ ಎಲ್ಲಾ ಬೆಳವಣಿಗೆ ನಡುವೆ ಸೈಲೆಂಟ್ ಆಗಿರುವ ಅನಂತಕುಮಾರ್ ಹೆಗಡೆ ಮತ್ತೆ ಮನೆಗೆ ಮರಳಿದ್ದಾರೆ. ಇದೀಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಜೊತೆಗೆ ಯಾರ ಸಂಪರ್ಕಕ್ಕೂ ಸಿಗದೇ ಮತ್ತೆ ಅಜ್ಞಾತವಾಸ ಮಾಡಿದ್ದಾರೆ.  ಈ ನಡುವೆ ತಮ್ಮ ತವರಿನಲ್ಲಿ ಸರಣಿ ಸಭೆ ನಡೆಸಿದ್ದ ಅನಂತಕುಮಾರ್ ಹೆಗಡೆ ಟಿಕೆಟ್ ಕೈತಪ್ಪುವ ಭೀತಿ ಕಾಡುತ್ತಿದ್ದಂತೇ ಸೈಲೆಂಟ್ ಆಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ