ಹೇಮಂತ್ ಕರ್ಕರೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮತ್ತೊಬ್ಬ ಬಿಜೆಪಿ ನಾಯಕಿ

ಮಂಗಳವಾರ, 30 ಏಪ್ರಿಲ್ 2019 (11:25 IST)
ನವದೆಹಲಿ : ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಹುತಾತ್ಮ ಹೇಮಂತ್ ಕರ್ಕರೆ ಅವರಿಗೆ ಅವಮಾನ ಮಾಡಿ ವಿವಾದಕ್ಕೀಡಾಗಿದ್ದರು. ಅದೇರೀತಿ ಇದೀಗ ಬಿಜೆಪಿ ಪಕ್ಷದ ಮತ್ತೊಬ್ಬ ನಾಯಕಿ ಹೇಮಂತ್ ಕರ್ಕರೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.



ಮಹಾರಾಷ್ಟ್ರ ಉಗ್ರ ನಿಗ್ರಹ ದಳದ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರು ಜೀವ ಕಳೆದುಕೊಂಡಿದ್ದು ತಮ್ಮ ಶಾಪದಿಂದ ಎಂದು ಹೇಳುವ ಮೂಲಕ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ವಿವಾದ ಸೃಷ್ಟಿಸಿ ಬಳಿಕ ಕ್ಷಮೆಯಾಚಿಸಿದ್ದರು.


ಈ ವಿವಾದ ತಣ್ಣಗಾಗುತ್ತಿರುವ ಬೆನ್ನಲೇ ಇದೀಗ ಬಿಜೆಪಿ ನಾಯಕಿ ಸುಮಿತ್ರಾ ಮಹಾಜನ್ ಅವರು, ಹೇಮಂತ್ ಕರ್ಕರೆ ಅವರನ್ನು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಪ್ರಾಣ ಅರ್ಪಿಸಿದ್ದಾರೆಂಬ ಕಾರಣಕಷ್ಟೇ ಅವರನ್ನು ಹುತಾತ್ಮರು ಎನ್ನಬಹದು. ಆದರೆ, ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹದಳ ಮುಖ್ಯಸ್ಥರಾಗಿ ಅವರು ಹೇಳಿಕೊಳ್ಳುವಂತಹ ಒಳ್ಳೆಯ ಕೆಲಸ ಮಾಡಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ