ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಕ್ಷಿಪ್ರ ಕ್ರಾಂತಿ!
ಎಐಎಡಿಎಂಕೆ ಪಕ್ಷದ ಉಪ ಕಾರ್ಯದರ್ಶಿ ದಿನಕರನ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಪಕ್ಷ ಹೋಳಾಗದಂತೆ ತಡೆಯಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಅನುಸರಿಸುವುದಾಗಿ ಶಾಸಕರು ಯತ್ನ ನಡೆಸಿದ್ದಾರೆ. ಹೀಗಾಗಿ ತಮಿಳುನಾಡು ರಾಜಕೀಯದಲ್ಲಿ ಎಂತಹ ಬದಲಾವಣೆಯಾಗುತ್ತದೆ ಎಂದು ಕಾದು ನೋಡಬೇಕಿದೆ.