ಕೋರ್ಟಿನಲ್ಲಿ ತಮ್ಮ ವಾದವನ್ನು ತಾವೇ ಮಂಡಿಸುವಲ್ಲಿ ಸಿದ್ಧ ಹಸ್ತರು.
ಚೆನ್ನೈ ನಗರದ ಟ್ರಾಫಿಕ್ ದುರವಸ್ಥೆಯಿಂದ ಬೇಸತ್ತು ಸ್ವಯಂ ಪ್ರೇರಣೆಯಿಂದ ಟ್ರಾಫಿಕ್ ನಿಯಂತ್ರಣಕ್ಕೆ ಕಾರಣರಾಗಿದ್ದಕ್ಕೆ ತಮಿಳುನಾಡು ಪೊಲೀಸ್ ಇಲಾಖೆಯಿಂದ ಗುರುತಿನ ಚೀಟಿ ಪಡೆದಿರುವ ಅವರು ರಾಜ್ಯಾದ್ಯಂತ ಟ್ರಾಫಿಕ್ ರಾಮಸ್ವಾಮಿ ಎಂದೇ ಪ್ರಸಿದ್ಧರಾಗಿದ್ದಾರೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ದೋಷಿ ಎಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಕಾರಣ ಅವರು ಶಾಸಕಿ ಸ್ಥಾನವನ್ನು ಕಳೆದುಕೊಂಡಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ನಿರ್ದೋಶಿ ಎಂದು ತೀರ್ಪು ನೀಡಿದ್ದರಿಂದ ಜಯಲಲಿತಾ ಮತ್ತೆ ಮುಖ್ಯಮಂತ್ರಿಯಾಗಿದ್ದು, ಆರ್ಕೆ ನಗರ ಕ್ಷೇತ್ರದಿಂದ ಕಣಕಿಳಿಯುತ್ತಿದ್ದಾರೆ.