ಕೇಜ್ರಿವಾಲ್ ವಿರುದ್ಧ ಮತ್ತೊಂದು ಮಾನನಷ್ಟ ಮೊಖದ್ದಮೆ ದಾಖಲಿಸಿದ ಜೇಟ್ಲಿ

ಸೋಮವಾರ, 22 ಮೇ 2017 (16:08 IST)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಮತ್ತೊಂದು ಮಾನನಷ್ಟ ಮೊಖದ್ದಮೆ ದಾಖಲಿಸಿದ್ದಾರೆ.
 
ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ವಂಚಕ ಎಂದು ಕರೆದಿದ್ದಾರೆ. ಆದ್ದರಿಂದ ಅರವಿಂದ್ ಕೇಜ್ರಿವಾಲ್ ಅರುಣ್ ಜೇಟ್ಲಿ ಅವರಿಗೆ 10 ಕೋಟಿ ರೂಪಾಯಿ ಮಾನನಷ್ಟ ಪರಿಹಾರ ನೀಡಬೇಕು ಎಂದು ಜೇಟ್ಲಿ ಪರ ವಕೀಲ ಮಾಣಿಕ್ ದೋಗ್ರ ಹೇಳಿದ್ದಾರೆ.
 
ಈಗಾಗಲೇ ಅರುಣ್ ಜೇಟ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಿದ್ದು ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆದಾಗ ಕೇಜ್ರಿವಾಲ್ ಪರ ವಕೀಲ ರಾಮ್ ಜೇಠ್ಮಲಾನಿ ಅರುಣ್ ಜೇಟ್ಲಿ ಅವರನ್ನು ವಂಚಕ ಎಂದು ಕರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ