ದೆಹಲಿ: ಇಂದು ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾದ ವಿತ್ತ ಸಚಿವ ಅರುಣ್ ಜೇಟ್ಲಿ

ಮಂಗಳವಾರ, 2 ಸೆಪ್ಟಂಬರ್ 2014 (14:35 IST)
ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ನಗರದ ಆಸ್ಪತ್ರೆಯೊಂದರಲ್ಲಿ ಇಂದು ಯಶಸ್ವಿ ಶಸ್ತ್ರಟಿಕಿತ್ಸೆಗೊಳಗಾಗಿದ್ದಾರೆ ಎಂದು ಸಚಿವಾಲಯದ ಅಧಿಕಾರಿ ಮೂಲಗಳು ತಿಳಿಸಿವೆ.
 
ಸಾಕೇತ್‌ನಲ್ಲಿರುವ ಮ್ಯಾಕ್ಸ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಜೇಟ್ಲಿಯವರಿಗೆ ವೈದ್ಯ ಪ್ರದೀಪ್ ಕೆ.ಚೌಬೆ ನೇತೃತ್ವದ ತಂಡ  ಶಸ್ತ್ರಚಿಕಿತ್ಸೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಅರುಣ್ ಜೇಟ್ಲಿಯವರು ಸೋಮವಾರದಂದು ಸಂಜೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯ ಪ್ರದೀಪ್ ಚೌಬೆ ತಿಳಿಸಿದ್ದಾರೆ.
 
 
 
 
 
 
 

ವೆಬ್ದುನಿಯಾವನ್ನು ಓದಿ