ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೆ ಆದ ಸ್ಥಿತಿಯೇ ವಿತ್ತ ಸಚಿವ ಅರುಣ್ ಜೇಟ್ಲಿಗೂ ಆಗಲಿದೆ!

ಸೋಮವಾರ, 9 ಏಪ್ರಿಲ್ 2018 (08:48 IST)
ನವದೆಹಲಿ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಇದೀಗ ಡಯಾಲಿಸಿಸ್ ಮಾಡಲಾಗುತ್ತಿದ್ದು, ವೈದ್ಯರು ತೀವ್ರ ನಿಗಾವಹಿಸುತ್ತಿದ್ದಾರೆ ಎನ್ನಲಾಗಿದೆ.  ಶಸ್ತ್ರಚಿಕಿತ್ಸೆಗೆ ಮೊದಲು ಮೂತ್ರಪಿಂಡ ವೈಫಲ್ಯದಿಂದಾಗಿ ಇನ್ಯಾವುದೇ ಇತರ ಸಮಸ್ಯೆಗಳು ಬಾರದಂತೆ ಡಯಾಲಿಸಿಸ್ ಮಾಡಲಾಗುತ್ತಿದೆ.

ಕೆಲವು ತಿಂಗಳುಗಳ ಹಿಂದೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡಾ ಇದೇ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದೀಗ ವಿತ್ತ ಸಚಿವ ಅರುಣ್ ಜೇಟ್ಲಿ ಕೂಡಾ ಕಿಡ್ನಿ ಬದಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ