ಆರುಷಿ ಕೊಲೆ ಪ್ರಕರಣ: ತಲ್ವಾರ್ ದಂಪತಿಗೆ ಇನ್ನೂ ಮುಗಿದಿಲ್ಲ ಗಂಡಾಂತರ?

ಶನಿವಾರ, 21 ಅಕ್ಟೋಬರ್ 2017 (09:39 IST)
ನವದೆಹಲಿ: ಪುತ್ರಿ ಆರುಷಿ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ದೋಷ ಮುಕ್ತಗೊಂಡು ಜೈಲಿನಿಂದ ಬಿಡುಗಡೆಯಾಗಿರುವ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ದಂಪತಿಗೆ ಇನ್ನೂ ಸಂಕಷ್ಟ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

 
ದಂಪತಿಯನ್ನು ಆರೋಪದಿಂದ ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಹೇಮರಾಜ್ ಕುಟುಂಬದವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ತಲ್ವಾರ್ ದಂಪತಿ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಇದರ ವಿರುದ್ಧ ಅಸಮಾಧಾನಗೊಂಡಿರುವ ಹೇಮರಾಜ್ ಕುಟುಂಬ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇದರೊಂದಿಗೆ ಮತ್ತೆ ಪ್ರಕರಣಕ್ಕೆ ಮರುಜೀವ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ