ಇಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನವೇ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ್ಧಾರೆ. ಸದ್ಯ, 21 ಸದಸ್ಯರ ಆಮ್ ಆದ್ಮಿಯ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದ್ದು, ಭಿನ್ನಮತೀಯರಾಗಿ ಗುರುತಿಸಿಕೊಂಡಿರುವ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಹಣೆಬರಹ ನಿರ್ಧಾರವಾಗಲಿದೆ.
ಈ ಕುರಿತು, ನಿನ್ನೆ ಟ್ವೀಟ್ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಪಕ್ಷದ ಬೆಳವಣಿಗೆಗಳ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದರು. ಪಕ್ಷದ ಸೈದ್ಧಾಂತಿಕ ಭಿನ್ನಮತವನ್ನ ಹೆಚ್ಚಲು ಬಿಡುವುದಿಲ್ಲ ಎಂದಿದ್ದರು. ಇದರ ಬೆನ್ನಲ್ಲೇ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. -