ರೋಡ್ ಶೋ ವೇಳೆ ಸಿಎಂ ಅರವಿಂದ ಕೇಜ್ರಿವಾಲ್ ಕಪಾಳಕ್ಕೆ ಬಾರಿಸಿದ ವ್ಯಕ್ತಿ

ಭಾನುವಾರ, 5 ಮೇ 2019 (11:50 IST)
ನವದೆಹಲಿ : ಎಎಪಿ ಪಕ್ಷದ ಮುಖ್ಯಸ್ಥ, ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ವ್ಯಕ್ತಿಯೊರ್ವ ಕಪಾಳಕ್ಕೆ ಬಾರಿಸಿದ ಘಟನೆ ದೆಹಲಿಯ ಮೋತಿ ನಗರದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ನಡೆದಿದೆ.



ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಕೇಜ್ರಿವಾಲ್ ರೋಡ್ ಶೋ ನಡೆಸಿದ್ದರು. ಆ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ನುಗ್ಗಿ ಕಾರು ಹತ್ತಿ ಕೇಜ್ರಿವಾಲ್ ಮುಖಕ್ಕೆ ಬಾರಿಸಿ ಪರಾರಿಯಾಗಲು ಯತ್ನಿಸಿದ್ದ, ಆಗ  ಎಚ್ಚೆತ್ತ ಕಾರ್ಯಕರ್ತರು ವ್ಯಕ್ತಿಯನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.

 

ಸಿಎಂ ಅರವಿಂದ ಕೇಜ್ರಿವಾಲ್ ಅವರ ಮೇಲೆ ಈ ಹಿಂದೆ ಕೂಡ ಈ ರೀತಿ  ದಾಳಿಗಳು ನಡೆದಿದ್ದು, ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿದೆ ಎಂದು ಎಎಪಿ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ