ಶಾಂತಿಯ ನೆಲೆವೀಡಾಗಿದ್ದ ಆಸ್ಸಾಂ ರಾಜ್ಯ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಶಾಂತಿ ಕದಡಿದಂತಾಗಿದೆ. ಇಂದು ಶಂಕಿತ ಎನ್ಡಿಎಫ್ಬಿ ಉಗ್ರರು ಜನನಿಬಿಡ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿದಾಗ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಆಸ್ಸಾ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಹಾಯ್ ಮಾತನಾಡಿ, ಎನ್ಡಿಎಫ್ಬಿ ಉಗ್ರರ ಕೈವಾಡ ಕಂಡುಬಂದಿದ್ದು, ಉಗ್ರರ ಪತ್ತೆಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 12,30 ಗಂಟೆಗೆ ಉಗ್ರರು ಮಾರುಕಟ್ಟೆಯಲ್ಲಿ ಗುಂಡಿನ ದಾಳಿ ನಡೆಸಿದಾಗ 12 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇತರ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.