ರೋಹಿತ್ ಪರ ಹೈದರಾಬಾದ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರೋಹಿತ್ ಅವರ ಸ್ನೇಹಿತರು ಮತ್ತು ಕುಟುಂಬದವರ ಮನವಿಯ ಮೇರೆಗೆ ನ್ಯಾಯಕ್ಕಾಗಿ ಅವರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಲು ನಾನು ಇಲ್ಲಿಗೆ ಬಂದಿದ್ದೇನೆ. ಕನಸುಗಳು ಮತ್ತು ಆಕಾಂಕ್ಷೆಗಳಿಂದ ತುಂಬಿದ್ದ ಯುವ ಜೀವವೊಂದು ಅದನ್ನು ಸಾಧಿಸುವ ಮೊದಲೇ ಮುದುಡಿ ಹೋಯಿತು ಎಂದು ಖೇದ ವ್ಯಕ್ತ ಪಡಿಸಿದರು.