ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಆರೋಪಿಗಳಿಗೆ ಕ್ಲೀನ್ ಚಿಟ್

ಬುಧವಾರ, 30 ಸೆಪ್ಟಂಬರ್ 2020 (12:40 IST)
ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಿದೆ.

1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಉಪಪ್ರಧಾನಿ ಎಲ್.ಕೆ.ಅಡ್ವಾನಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ ಆರೋಪಿಗಳಿದ್ದು, ಇವರೆಲ್ಲರೂ ನಿರ್ದೋಷಿಗಳೆಂದು ಲಕ್ನೋ ಸಿಬಿಐ ವಿಶೇಷ ಕೋರ್ಟ್ ನಿಂದ ತೀರ್ಪು ನೀಡಲಾಗಿದೆ.

ನ್ಯಾ.ಸುರೇಂದ್ರ ಕುಮಾರ್ ಯಾದವ್ ಅವರು ಇಂದು ಮಹತ್ವದ  ತೀರ್ಪನ್ನು ಪ್ರಕಟಿಸಿದ್ದಾರೆ. ಆ ಮೂಲಕ ಬಿಜೆಪಿ ಹಿರಿಯ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ