ಮಾಜಿ ಸಿಎಂ ಜಯಲಲಿತಾ ಆಸ್ತಿ ಜಪ್ತಿಗೆ ಬೆಂಗಳೂರು ವಿಶೇಷ ಕೋರ್ಟ್ ಆದೇಶ

ಮಂಗಳವಾರ, 30 ಮೇ 2017 (14:03 IST)
ದಿವಂಗತ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಆಸ್ತಿಪಾಸ್ತಿಯನ್ನು ಜಪ್ತಿ ಮಾಡುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
 
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಮಾಜಿ ಸಿಎಂ ಜಯಲಲಿತಾ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದೆ. 
 
ಬೆಂಗಳೂರಿನ ವಿಶೇಷ ನ್ಯಾಯಾಲಯ ತಮಿಳುನಾಡಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನಿರ್ದೇಶನ ನೀಡಿ, ಕೂಡಲೇ ಜಯಲಲಿತಾ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳುವಂತೆ ಆದೇಶ ನೀಡಿತ್ತು. 
 
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಚೆನ್ನೈ, ಕಾಂಚಿಪುರಂ, ತಿರುವಳ್ಳೂರು ಸೇರಿದಂತೆ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಜಯಲಲಿತಾ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ