ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗ: ಉದ್ಭವ್ ಠಾಕ್ರೆ ಗುಡುಗು

ಶುಕ್ರವಾರ, 24 ನವೆಂಬರ್ 2017 (14:07 IST)
ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಮಹಾರಾಷ್ಟ್ರದ ಗಡಿ ಜಿಲ್ಲೆಯಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಗುಡುಗಿದ್ದಾರೆ.
 
ಶಿವಸೇನೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿ ಹಿಂದೆ ಮಹಾರಾಷ್ಟ್ರದ ಕೈಬಿಟ್ಟು ಹೋಗಿತ್ತು. ಆದರೆ, ಶಿವಸೇನೆ ಶಾಸಕರು, ಸಂಸದರು ಬೆಳಗಾವಿ ಸೇರ್ಪಡೆಯ ಬಗ್ಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
 
ಬೆಳಗಾವಿ ಕರ್ನಾಟಕ ಆಕ್ರಮಿತ ಪ್ರದೇಶವಾಗಿದೆ. ಮುಂದೊಂದು ದಿನ ಭೆಳಗಾವಿ ಮಹಾರಾಷ್ಟ್ರ ರಾಜ್ಯಕ್ಕೆ ಸೇರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಯಾವುದೇ ರೀತಿಯ ಹೋರಾಟಕ್ಕೆ ಶಿವಸೇನೆ ಸನ್ನದ್ದವಾಗಿದೆ ಎಂದು ಘೋಷಿಸಿದ್ದಾರೆ.
 
ಕರ್ನಾಟಕ ರಾಜ್ಯದ ಗಡಿ ಜಿಲ್ಲೆಯ ಗ್ರಾಮಕ್ಕೆ ಆಗಮಿಸಿ ರಾಜ್ಯದ ವಿರುದ್ಧವೇ ಹೇಳಿಕೆ ನೀಡಿದ ಉದ್ಭವ್ ಠಾಕ್ರೆ ವಿರುದ್ಧ ಸರಕಾರ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ