ನವದೆಹಲಿ: ಕರ್ನಾಟಕ ಸರ್ಕಾರ ಭಾರೀ ಟೀಕೆಗೆ ಒಳಗಾಗಿರುವ ಎಂ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಈ ಘಟನೆಯಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಿರ್ವಹಿಸುವ ಕಾಯ್ದೆಯನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಹೇಳಿದರು.
"ಕಲಿಯಬೇಕಾದ ಪಾಠಗಳಿವೆ. ನಾವು ಒಂದು ಯೋಜನೆಯನ್ನು ರೂಪಿಸುತ್ತೇವೆ, ಭವಿಷ್ಯದ ಜನಸಂದಣಿಗೂ ನಮ್ಮಲ್ಲಿ ನೀತಿಗಳಿವೆ. ನಾವು ಒಂದು ಕಾಯ್ದೆಯನ್ನು ರೂಪಿಸಬೇಕು, ಅದನ್ನೇ ನಾವು ಹುಡುಕುತ್ತಿದ್ದೇವೆ. ಈ ಘಟನೆಯಿಂದ ನಾವು ಕಲಿತಿದ್ದೇವೆ ಎಂದು ದೆಹಲಿ ಮಹಾನಗರ ಪಾಲಿಕೆ ಮೇಯರ್ ರಾಜಾ ಇಕ್ಬಾಲ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ಟೀಕಿಸುವ ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಿದ ಅವರು, "ಅವರು ಮೃತ ದೇಹದ ಎದುರು ರಾಜಕೀಯ ಮಾಡುತ್ತಿದ್ದಾರೆ. ನಾನು ಅವರ ಬಗ್ಗೆ ವಿಷಾದಿಸುತ್ತೇನೆ" ಎಂದು ಹೇಳಿದರು.
ಜೂನ್ 4 ರಂದು, ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದರು ಮತ್ತು 56 ಕ್ಕೂ ಹೆಚ್ಚು ಜನರು ಗಾಯಗೊಂಡರು, ಆರ್ಸಿಬಿಯ ಮೊದಲ ಐಪಿಎಲ್ ಗೆಲುವಿನ ಆಚರಣೆಯು ದುರಂತವಾಯಿತು.
ಘಟನೆಯ ನಂತರ, ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸದಿದ್ದಕ್ಕಾಗಿ ವಿರೋಧ ಪಕ್ಷ ಬಿಜೆಪಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ.