ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ರಾಹುಲ್ ಗಾಂಧಿಗೆ ಬಿಗ್ ಶಾಕ್!

ಶುಕ್ರವಾರ, 5 ಏಪ್ರಿಲ್ 2019 (14:00 IST)
ನವದೆಹಲಿ : ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮೇಲೆ ಬಿಟ್ಟ ಬಾಣ ಇದೀಗ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ  ರಾಹುಲ್ ಗಾಂಧಿಗೆ ತಿರುಗು ಬಾಣವಾಗಿ ಪರಿಣಮಿಸಿದೆ.


ಹೌದು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸುಮಲತಾ ಹೆಸರಿನ ಮೂವರನ್ನು ಕಣಕ್ಕೆ ಇಳಿಸಲಾಗಿದೆ. ಅದೇರೀತಿ ಕಲಬುರಗಿಯಲ್ಲೂ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಮತ ವಿಭಜಿಸಲು, ಜಾಧವ್ ಹೆಸರಿನ ಮೂವರು ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.


ಆದರೆ ಇದೀಗ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ ರಾಹುಲ್ ಗಾಂಧಿ ಅವರ ವಿರುದ್ಧ ಅದೇ ಹೆಸರಿನ ಕೇರಳ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿರುವ ಎರುಮೆಲೆ ನಿವಾಸಿ ರಾಹುಲ್ ಗಾಂಧಿ ಕೆ.ಇ ಹಾಗೂ ಅಖಿಲ ಭಾರತ ಮಕ್ಕಳ್ ಘಟಕದಿಂದ ರಾಹುಲ್ ಗಾಂಧಿ ಕೆ. ನಾಮಪತ್ರ ಸಲ್ಲಿಸುವುದರ ಮೂಲಕ ಕಾಂಗ್ರೆಸ್‍ ಗೆ ಬಿಗ್ ಶಾಕ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ