ನಿತೀಶ್ ಕುಮಾರ್‌ಗೆ ಕೇಜ್ರಿವಾಲ್ ಬೆಂಬಲ: ಕಾರ್ಯಕರ್ತರ ಅಸಮಧಾನ

ಬುಧವಾರ, 2 ಸೆಪ್ಟಂಬರ್ 2015 (17:18 IST)
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್‌‌ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡುತ್ತಿರುವ ಬೆಂಬಲದಿಂದ ಆಪ್ ಕಾರ್ಯಕರ್ತರು ಅಸಮಾಧಾನ ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಹಾರ್ ಸಿಎಂ ನಿತೀಶ್ ಕುಮಾರ್‌ಗೆ ಬೆಂಬಲ ನೀಡುವ ಮುನ್ನ ಆಮ್ ಆದ್ಮಿ ಪಕ್ಷದ ಕೇಂದ್ರೀಯ ನಾಯಕತ್ವ ಕೂಡಾ ಚರ್ಚೆ ನಡೆಸಿಲ್ಲ ಎಂದು ಆಪ್ ನಾಯಕರು ಆರೋಪಿಸಿದ್ದಾರೆ.
 
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷಗಳು ಒಂದಾಗಿ ಕಣಕ್ಕಿಳಿದಿವೆ.  
 
ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವರಾಗಿದ್ದ ಪ್ರವೀಣ್ ಅಮಾನುಲ್ಲಾ ಮಾತನಾಡಿ, ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಕೇಜ್ರಿವಾಲ್  ನಿತೀಶ್ ಕುಮಾರ್ ಅವರನ್ನು ಬೆಂಬಲಿಸಲಿ. ಆದರೆ, ಯಾವುದೇ ವಿಚಾರ ಮಾಡದೆ ಬೆಂಬಲಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. 
 

ವೆಬ್ದುನಿಯಾವನ್ನು ಓದಿ