ಬಿಹಾರದಲ್ಲಿ ಪತ್ರಕರ್ತ ಪಂಕಜ್ ಮಿಶ್ರಾ ಮೇಲೆ ಶೂಟೌಟ್

ಗುರುವಾರ, 7 ಸೆಪ್ಟಂಬರ್ 2017 (18:47 IST)
ಬಿಹಾರ: ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 2 ದಿನ ಕಳೆದಿದೆ. ಇದರ ಬೆನ್ನಲ್ಲೇ ಅರ್ವಾಲ್ ನಲ್ಲಿ ಮತ್ತೊಬ್ಬ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆದಿದೆ.

ರಾಷ್ಟ್ರೀಯ ಸಹರಾ ಪತ್ರಿಕೆಯ ವರದಿಗಾರ ಪಂಕಜ್ ಮಿಶ್ರಾ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಕಜ್ ಸ್ಥಿತಿ ಗಂಭೀರವಾಗಿದ್ದು, ಪಾಟ್ನಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅರ್ವಾಲ್ ಎಸ್ಪಿ ದಿಲೀಪ್ ಕುಮಾರ್, ಇಬ್ಬರು ವ್ಯಕ್ತಿಗಳು ಪಂಕಜ್ ಮಿಶ್ರಾ ಮೇಲೆ ಗುಂಡಿನ ದಾಳಿ ನಡೆದಿದೆ. ಪಂಕಜ್ ಬ್ಯಾಂಕ್ ನಿಂದ 1 ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಬರುವಾಗ ಅದನ್ನು ಕದಿಯಲು ಈ ಗುಂಡಿನದಾಳಿ ನಡೆಸಲಾಗಿದೆ. ಇದೊಂದು ವೈಯಕ್ತಿಕ ದ್ವೇಷದಿಂದ ಈ ದಾಳಿ ನಡೆದಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ  ಎಂದು ಎಸ್ಪಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ