ಬಿಹಾರ್ ರಾಜ್ಯದಲ್ಲಿ ಮೊದಲ ಹಂತದ 49 ವಿಧಾನಸಭಾ ಕ್ಷೇತ್ರಗಳ ಮತದಾನ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಅಲೆ ಬಿಜೆಪಿ ಪರವಾಗಿದ್ದು, ಬಿಜೆಪಿಯೇ ಮುಂದಿನ ಸರಕಾರ ರಚಿಸುವ ಸಾಧ್ಯತೆಗಳಿವೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಕೂಡಾ ವಂಚಿಸಿಯೇ ಮೈತ್ರಿಕೂಟದ ತೆಕ್ಕೆಗೆ ಸೆಳೆದಿದ್ದಾರೆ. ಮೇವು ಹಗರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೆಲ ನಿತೀಶ್ ಬೆಂಬಲಿಗರು ಲಾಲು ಯಾದವ್ರನ್ನು ಜನತಾ ಪರಿವಾರಕ್ಕೆ ಕರೆತಂದಿದ್ದಾರೆ ಎಂದು ಆರೋಪಿಸಿದ್ದಾರೆ.