ಪ.ಬಂಗಾಲದ ಬಳಿಕ ಈಗ ಬಿಹಾರದ ಗಣರಾಜ್ಯೋತ್ಸವ ಸ್ತಬ್ಧಚಿತ್ರಕ್ಕೂ ಅವಕಾಶ ನಿರಾಕರಿಸಿದ ಕೇಂದ್ರ
ಇದೀಗ ಬಂಗಾಲದ ಬಳಿಕ ಬಿಹಾರದ ಸ್ತಬ್ಧ ಚಿತ್ರವನ್ನೂ ತಿರಸ್ಕರಿಸಲಾಗಿದೆ. ಇದು ಮತ್ತೆ ಸಿಎಂ ನಿತೀಶ್ ಕುಮಾರ್ ಮತ್ತು ಕೇಂದ್ರದ ನಡುವೆ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ನಿಗದಿತ ಮಾನದಂಡಗಳನ್ನು ಪೂರ್ತಿ ಮಾಡಿಲ್ಲ ಎನ್ನುವ ಕಾರಣಕ್ಕೆ ಸ್ತಬ್ಧ ಚಿತ್ರವನ್ನು ತಿರಸ್ಕರಿಸಲಾಗಿದೆಯಾದರೂ, ಕೇಂದ್ರ ಬೇಕೆಂದೇ ತನ್ನ ವಿರೋಧಿ ಪಕ್ಷಗಳು, ನಾಯಕರ ಸರ್ಕಾರಗಳಿರುವ ರಾಜ್ಯಗಳ ಸ್ತಬ್ಧ ಚಿತ್ರವನ್ನು ತಿರಸ್ಕರಿಸುತ್ತಿದೆ ಎಂದು ಈ ರಾಜ್ಯಗಳು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ.