ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರಹಂಕಾರಿ ವ್ಯಕ್ತಿಯಾಗಿದ್ದಾರೆ, ಅಂತಹ ವ್ಯಕ್ತಿಗೆ ಮತ ಹಾಕುವುದು ವ್ಯರ್ಥವಾದಂತೆ. ಆದ್ದರಿಂದ, ಬಿಹಾರ್ ರಾಜ್ಯದ ಸಂಪೂರ್ಣ ಅಭಿವೃದ್ಧಿಗಾಗಿ ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ
ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ಮೋದಿ, ಉದ್ಯೋಗಕ್ಕಾಗಿ ಯುವಕರು ವಲಸೆ ಹೋಗುತ್ತಿರುವ ಸಮಸ್ಯೆ, ಬಡವರ ಸಮಸ್ಯೆಗಳು ರಾಜ್ಯದ ಅಭಿವೃದ್ಧಿಯಲ್ಲಿ ಅಡಗಿದೆ ಎಂದು ಅಭಿಪ್ರಾಯಪಟ್ಟರು.