ರಾಜ್ಯದಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಏಮ್ಸ್ ಸಮನ್ವಯ ಸಮಿತಿ(ಎಸಿಸಿ) ನೀಡಿದ್ದ ಬಂದ್ ಕರೆ, ಘರ್ಷಣೆಗೆ ತಿರುಗಿದ್ದು, ಏಮ್ಸ್ ಸ್ಥಾಪನೆಯ ಹೋರಾಟಗಾರರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ಕೆಲ ಕಾಲ ಉದ್ರಿಕ್ತ ವಾತಾವಾರಣಕ್ಕೆ ಕಾರಣವಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಹರಸಾಹಸ ಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಬಂದ್ ಸಹಜವಾಗಿ ಮುಂದುವರಿದಿದೆ. ಕೆಲವೆಡೆ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ, ಕಾರ್ಯಕರ್ತರು ಕೆಲ ಬಾಗಗಳಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದಾರೆ ಎಂದು ಎಸ್ಪಿ ಪಾಂಡೆ ಮಾಹಿತಿ ನೀಡಿದ್ದಾರೆ.