ಈಶ್ವರಪ್ಪ, ಪ್ರತಾಪಸಿಂಹಗೆ ಎಚ್ಚರಿಕೆ ನೀಡಿದ ಬಿಜೆಪಿ ವರಿಷ್ಠರು

ಶುಕ್ರವಾರ, 12 ಜನವರಿ 2018 (06:44 IST)

ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಪ್ರತಾಪಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ಪರಿವರ್ತನಾ ಯಾತ್ರೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಅನಗತ್ಯವಾದ ಗೊಂದಲ ಸೃಷ್ಠಿಸಬಾರದು ಎಂದು ಕೆ.ಎಸ್.ಈಶ್ವರಪ್ಪ ಅವರಿಗೆ ಪಕ್ಷದ ವರಿಷ್ಟರು ಎಚ್ಚರಿಕೆ ರವಾನಿಸಿದ್ದಾರೆ.

ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವಂತಹ ಚಟುವಟಿಕೆಯಲ್ಲಿ ತೊಡಗದೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ ಸಂಸದ ಪ್ರತಾಪಸಿಂಹ ಅವರಿಗೂ ಎಚ್ಚರಿಕೆ ನೀಡಿರುವ ವರಿಷ್ಠರು ವಿವಾದ ಸೃಷ್ಠಿಸುವಂತಹ ಟ್ವಿಟ್ ಹಾಗೂ ಹೇಳಿಕೆ ಹೊರಡಿಸದಂತೆ ಸಾರ್ವಜನಿಕವಾಗಿ ಗಂಭೀರತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ