ಬಿಹಾರ್ ಸೋಲಿನ ಬಗ್ಗೆ ಪಕ್ಷದ ಹಿರಿಯ ನಾಯಕರು ವಾಗ್ದಾಳಿ ನಡೆಸುತ್ತಿರುವುದನ್ನು ತಡೆಯಲು ಯತ್ನಿಸುತ್ತಿರುವ ಬಿಜೆಪಿ ಹೈಕಮಾಂಡ್, ಪಕ್ಷದ ದಿಗ್ಗಜ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಆಡ್ವಾಣಿ ಪಕ್ಷದ ಸೋಲು ಗೆಲುವಿನಲ್ಲಿ ಸಾಮೂಹಿಕ ಹೊಣೆ ಹೊರುವಂತಹ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿಕೆ ನೀಡಿದೆ.
ಆಡ್ವಾಣಿ, ಮುರಳಿ ಮನೋಹರ್ ಜೋಷಿ, ಯಶ್ವಂತ್ ಸಿನ್ಹಾ, ಶತ್ರುಘ್ನ ಸಿನ್ಹಾ, ಶಾಂತಾ ಕುಮಾರ್ ಬಿಹಾರ್ ಸೋಲಿಗೆ ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾರಣರಾಗಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು ಮತ್ತು ನಿತಿನ್ ಗಡ್ಕರಿ, ಬಿಹಾರ್ ಸೋಲಿಗೆ ಪ್ರತಿಯೊಬ್ಬ ಬಿಜೆಪಿ ನಾಯಕರು ಹೊಣೆಯಾಗಿದ್ದಾರೆ ಎಂದು ಜಂಟಿ ಹೇಳಿಕೆಯನ್ನು ಹೊರಡಿಸಿದ್ದಾರೆ.