ಮಮತಾ ಬ್ಯಾನರ್ಜಿ ತಲೆ ಕಡಿದು ತಂದವರಿಗೆ 11 ಲಕ್ಷ ರೂ. ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ

ಬುಧವಾರ, 12 ಏಪ್ರಿಲ್ 2017 (10:34 IST)
ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡನೊಬ್ಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲೆ ಕಡಿದವರಿಗೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಿರುವ ಘಟನೆ ನಡೆದಿದೆ.

ಬಿರ್ಭೂಮ್ ಜಿಲ್ಲೆಯಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ನಡೆದ ಜೈ ಶ್ರೀರಾಮ್ ರ್ಯಾಲಿ ಚದುರಿಸಕು ಪೊಲಿಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಯೋಗೇಶ್ ವರ್ಷ್ಣಯ್, ಸಿಎಂ ಮಮತಾ ಬ್ಯಾನರ್ಜಿ ಹಿಂದೂಗಳ ಬಗ್ಗೆ ಪೂರ್ವಾಗ್ರಹಪೀಡಿತರಾಗಿದ್ದು, ಅವರ ತಲೆಕಡಿದು ತಂದವರಿಗೆ 11 ಲಕ್ಷ ರೂ. ಬಹುಮಾನ ನಿಡಿಉವುದಾಗಿ ಘೋಷಿಸಿದ್ದಾರೆ.

 ಮಮತಾ ಬ್ಯಾನರ್ಜಿ ಹನುಮಾನ್ ಜಯಂತಿ ಪ್ರಯುಕ್ತ ನಡೆಯಬೇಕಿದ್ದ ಸರಸ್ವತಿ ಪೂಜೆಗೆ ಅವಕಾಶ ನೀಡಲಿಲ್ಲ. ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಆಯೋಜಿಸುತ್ತಾರೆ. ಯಾವಾಗಲೂ ಮುಸಲ್ಮಾನರಿಗೆ ಬೆಂಬಲ ನೀಡುತ್ತಾರೆ  ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ