ಬಿಜೆಪಿ ನಾಯಕಿ ರೂಪಾ ಗಂಗೂಲಿ ರಾಜ್ಯಸಭಾ ಸದಸ್ಯೆಯಾಗಿ ನೇಮಕ

ಮಂಗಳವಾರ, 4 ಅಕ್ಟೋಬರ್ 2016 (20:31 IST)
ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಅವರ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ನಾಯಕಿ ರೂಪಾ ಗಂಗೂಲಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.  
 
ಟೆಲಿವಿಜನ್ ಧಾರವಾಹಿ ಮಹಾಭಾರತ್‌ನಲ್ಲಿ ದ್ರೌಪದಿಯ ಪಾತ್ರವಹಿಸಿದ್ದ ರೂಪಾ ಗಂಗೂಲಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಸಕ್ಷ್ಮಿ ರತನ್ ಶುಕ್ಲಾ ವಿರುದ್ಧ ಸೋಲನುಭವಿಸಿದ್ದರು. 
 
ಬಿಜೆಪಿ ಹೈಕಮಾಂಡ್‌ನೊಂದಿಗೆ ಭಿನ್ನಾಭಿಪ್ರಾಯಗಳಿದಾಗಿ ನವಜೋತ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಇಂದು ರೂಪಾ ಗಂಗೂಲಿಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ಆದೇಶ ಹೊರಡಿಸಿದ್ದಾರೆ. 
 
1988ರಲ್ಲಿ ಮಹಾಭಾರತ ಧಾರವಾಹಿಯಲ್ಲಿ ದ್ರೌಪದಿಯಾಗಿ ನಟಿಸಿ ದೇಶಾದ್ಯಂತ ಖ್ಯಾತಿ ಗಳಿಸಿದ್ದ ರೂಪಾ ಗಂಗೂಲಿ, 1990 ಮತ್ತು 2000 ರವರೆಗೆ ಅನೇಕ ಬಾಲಿವುಡ್ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಕಳೆದ ವರ್ಷ ಗಂಗೂಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ