ಪ್ರಧಾನಿ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ಮೋದಿ ದೇಶದ ಆರ್ಥಿಕತೆಯ ಬಗ್ಗೆ ಒಂದು ಗಂಟೆ ಕಾಲ ಮಾತನಾಡಿದ್ದಾರೆ. ಆದರೆ, ಆರ್ಥಿಕ ಕುಸಿತದ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ ಎಂದು ಕಿಡಿಕಾರಿದರು.
ಒಂದೇ ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ, ಬಿಜೆಪಿ ಮುಖಂಡ ಯಶ್ವಂತ್ ಸಿನ್ಹಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿ ಮತ್ತು ಅವರ ಆರ್ಥಿಕ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ, ಯಶ್ವಂತ್ ಸಿನ್ಹಾರನ್ನು ಮಹಾಭಾರತದ ಶಲ್ಯಗೆ ಹೋಲಿಸಿ ವಾಗ್ದಾಳಿ ನಡೆಸಿದ್ದರು. ಇದೀಗ ಸಿನ್ಹಾ, ಮೋದಿ ಮತ್ತು ಜೇಟ್ಲಿಯವರನ್ನು ದುರ್ಯೋಧನ ಮತ್ತು ದುಶ್ಯಾಸನನಿಗೆ ಹೋಲಿಸಿ ತಿರುಗೇಟು ನೀಡಿದ್ದಾರೆ.