ದೇಶದ ಬಹುತೇಕ ರಾಜ್ಯಗಳು ಬರಗಾಲದಿಂದ ತತ್ತರಿಸಿದ್ರೆ ಪ್ರಧಾನಿ ಮೋದಿ ನೇತೃತ್ವದ ಸರಕಾರ ಎರಡು ವರ್ಷಗಳ ಅವಧಿ ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಮುಳುಗಿದೆ ಎನ್ನುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕೆಗೆ ಉತ್ತರಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ನಾವು ಸಂಭ್ರಮಾಚರಣೆಯಲ್ಲಿ ತೊಡಗಿಲ್ಲ, ನಮ್ಮ ಅಧಿಕಾರವಧಿಯ ಲೆಕ್ಕ ಕೊಡುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ.