ಇಬ್ಬರು ಕಾಂಗ್ರೆಸ್ ಶಾಸಕರಾದ ರಾಜೇಂದ್ರ ಭಂಡಾರಿ ಮತ್ತು ಜೀತ್ ರಾಮ್ ಸಾರ್ವಜನಿಕವಾಗಿ ಹೇಳಿಕೆ ನೀಡಿ, ಬಿಜೆಪಿ ಮುಖಂಡರು 50 ಕೋಟಿ ರೂಪಾಯಿಹಗಳ ಆಮಿಷವೊಡ್ಡಿದ್ದಲ್ಲದೇ ಅವರ ಕುಟುಂಬದ ಸದಸ್ಯರಿಗೆ ವಿಧಾನಸಭೆ ಟಿಕೆಟ್ ಮತ್ತು ರಾಜ್ಯಸಭೆ ಸದಸ್ಯತ್ವ ನೀಡುವುದಾಗಿ ಭರವಸೆ ನೀಡಿತ್ತು ಎಂದು ಆರೋಪಿಸಿದ್ದಾರೆ.
ಮತ್ತೊಬ್ಬ ಕಾಂಗ್ರೆಸ್ ಶಾಸಕ ವಿಧಾನಸಭೆಯ ಉಪಸಭಾ ಪತಿ ಅನುಸೂಯಾ ಪ್ರಸಾದ್ ಮೈಖುರಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲು ಸಿದ್ದತೆ ನಡೆಸಿದ್ದರು. ಆದರೆ, ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ಪಕ್ಷಕ್ಕೆ ತೋರಿದ್ದರಿಂದ ಅವರ ಯೋಜನೆ ವಿಫಲವಾಯಿತು ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.