ಮೋದಿಯವರ ಅತ್ಯಾಪ್ತರಾಗಿರುವ ಹೆಚ್ಚಿನ ಕೇಂದ್ರ ಸಚಿವರ, ಪಕ್ಷದ ಎಲ್ಲ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರ ಉಪಸ್ಥಿತಿಯಲ್ಲಿ ಶಾ ಅವರನ್ನು ಭಾನುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.
ಪಕ್ಷದ ಮಾರ್ಗದರ್ಶಕ ಮಂಡಳಿ ಸದಸ್ಯರಾದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ ಅವರು ಭಾನುವಾರ ಅಧ್ಯಕ್ಷರ ಪುನರಾಯ್ಕೆ ಸಂದರ್ಭದಲ್ಲಿ ಉಪಸ್ಥಿತರಿರಲಿಲ್ಲ. ಆದರೆ ಅದೇ ದಿನ ಅವರಿಬ್ಬರನ್ನು ಭೇಟಿಯಾಗಿ ಶಾ ಆಶೀರ್ವಾದಗಳನ್ನು ಪಡೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಮಿತ್ ಶಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ದಿಲ್ಲಿ ಮತ್ತು ಬಿಹಾರದಲ್ಲಿ ಪಕ್ಷ ಸೋಲು ಕಂಡಿದ್ದರೂ ಮಹಾರಾಷ್ಟ್ರ, ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಅಲ್ಲದೆ ಹೆಚ್ಚಿನ ಅಸ್ತಿತ್ವ ಇಲ್ಲದ ಕೇರಳ, ಅಸ್ಸಾಂ, ಪಶ್ಚಿಮ ಬಂಗಾಲದಲ್ಲಿ ನೆಲೆಯೂರುವಲ್ಲಿ ಪಕ್ಷ ಯಶಸ್ವಿಯಾಗಿತ್ತು.