ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ಲ್ಯಾನ್

ಶನಿವಾರ, 6 ಅಕ್ಟೋಬರ್ 2018 (10:44 IST)
ಹೈದರಾಬಾದ್: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಭರ್ಜರಿ ಯೋಜನೆ ರೂಪಿಸಿದೆ.

ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಅಧಿಕಾರಕ್ಕೆ ತರಲು ಬಿಜೆಪಿ ಶತಾಯಗತಾಯ ಪ್ಲ್ಯಾನ್ ಮಾಡುತ್ತಿದ್ದು, ಇದಕ್ಕಾಗಿ ಇಂದು ಹೈದರಾಬಾದ್ ನಲ್ಲಿ ಉನ್ನತ ಮಟ್ಟದ ಸಭೆ ನಡೆಸುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ತಂಡವನ್ನು ರಚನೆ ಮಾಡಲಾಗುತ್ತಿದ್ದು, ಕರ್ನಾಟಕದ 150 ಜನರ ತಂಡ ರೆಡಿಯಾಗುತ್ತಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಗೆಲ್ಲಲು ಯೋಜನೆ ರೂಪಿಸಲಾಗುತ್ತಿದೆ. ಹಿಂದೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಗುಜರಾತ್ ಟೀಂ ಕೆಲಸ ಮಾಡಿತ್ತು. ಅದೇ ರೀತಿ ಈ ಬಾರಿ ಕರ್ನಾಟಕದ ತಂಡ ಲೋಕಸಭೆ ಚುನಾವಣೆ ಪ್ರಚಾರದ ಕೆಲಸ ಮಾಡಲಿದೆ. ಇಂದಿನ ಸಭೆಗೆ ಕರ್ನಾಟಕ ವಿವಿಧ ಭಾಗದ ನಾಯಕರು, ಕಾರ್ಯಕರ್ತರು ಹೈದರಾಬಾದ್ ಗೆ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ