ರಾಜ್ಯ ರಾಜಧಾನಿ ಪಾಟ್ಣಾದಲ್ಲಿ ಶೀರೋಮಣಿ ರವಿದಾಸರ 639ನೆಯ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಿಎಂ, ದಲಿತರನ್ನು ಮತ್ತು ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಅಗತ್ಯ ಇನ್ನೂ ಇದೆ. ಅವರಿಗೆ ಮೀಸಲಾತಿ ಮುಂದುವರೆಯಲಿದೆ ಎಂದು ನಾವು ನಿಖರವಾಗಿ ಹೇಳಬಹುದು. ಅವರು ಸಮಾಜದಲ್ಲಿ ಗಮನಾರ್ಹ ಮತ್ತು ಅಗತ್ಯ ಸುಧಾರಣೆಗಳನ್ನು ಸಾಧಿಸಿದ್ದಾರೆಯೇ? ಅವರಿಗೆ ಮೀಸಲಾತಿ ಅಗತ್ಯ ಮತ್ತೂ ಇದೆ ಎಂದು ಹೇಳಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ಉಲ್ಲೇಖಿಸಿ ಹೇಳಿದ ಅವರು ಒಂದು ಕಡೆ ಜನರು ಡಾಕ್ಟರ್.ಬಿ.ಆರ್ ಅಂಬೇಡ್ಕರ್ ಮತ್ತು ರವಿದಾಸ್ ಅವರ ಜಯಂತಿಯನ್ನು ಆಚರಿಸುತ್ತಿದ್ದಾರೆ, ಇನ್ನೊಂದು ಕಡೆ ಅವರು ಅಸ್ತಿತ್ವದಲ್ಲಿರುವ ಮೀಸಲಾತಿ ವ್ಯವಸ್ಥೆಯನ್ನು ಪರಿಶೀಲಿಸುವ ಕುರಿತಂತೆ ಮಾತನ್ನಾಡುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಕಿಡಿಕಾರಿದ್ದಾರೆ.