ರವಿವಾರದಂದು ನಡೆಯಲಿರುವ ಬಿಜೆಪಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ವಿಧಾನಸಭೆ ಚುನಾವಣೆಗಳಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕೋ ಅಥವಾ ಬೇಡವೋ ಎನ್ನುವ ಕುರಿತಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ದೆಹಲಿ ಮತ್ತು ಬಿಹಾರ್ ರಾಜ್ಯದಲ್ಲಿ ಬಿಜೆಪಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಆದ್ದರಿಂದ ಹೀನಾಯ ಸೋಲನುಭವಿಸಿತ್ತು.ಆದರೆ, ಆಸ್ಸಾಂ ರಾಜ್ಯದಲ್ಲಿ ಸರ್ಬನಂದಾ ಸೋನೋವಾಲ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದಿತ್ತು.