ಗೋವಾದ ಸಮುದ್ರ ತೀರಗಳಲ್ಲಿ ಬಿಕಿನಿಗೆ ನಿಷೇಧ ಹೇರಬೇಕು ಎಂದು ಒತ್ತಾಯಿಸುವುದರ ಮೂಲಕ ಗೋವಾದ ಮಂತ್ರಿ ಸುದೀನ್ ಧವಳೀಕರ್ ವಿವಾದವನ್ನು ಸೃಷ್ಟಿಸಿದ ಬೆನ್ನ ಹಿಂದೆಯೇ, ಅವರ ಸಹೋದರ, ಸಹೋದ್ಯೋಗಿ ಮಂತ್ರಿ ದೀಪಕ್ ಧವಳೀಕರ್ "ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲಿದ್ದಾರೆ" ಎಂದು ವಿಧಾನಸಭೆಯಲ್ಲಿ ಹೇಳುವ ಮೂಲಕ ವಿವಾದವನ್ನು ಹುಟ್ಟು ಹಾಕಿದ್ದರು. ಅದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಡಿಸೋಜಾ ಹೇಳಿಕೆ ಗೋವಾ ವಿಧಾನಸಭೆಯಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿದ್ದು, ಸ್ಥಳೀಯ ಕಾಂಗ್ರೆಸ್ ಮತ್ತು ಎನ್ಸಿಪಿಗಳು ಅವರನ್ನು ಮಂತ್ರಿಮಂಡಲದಿಂದ ವಜಾ ಮಾಡುವಂತೆ ಆಗ್ರಹಿಸಿವೆ. "ನಮ್ಮ ದೂರಿನ ಮೇಲೆ ಕ್ರಮ ಕೈಗೊಳ್ಳಲು ರಾಜ್ಯಪಾಲರು ವಿಫಲರಾದರೆ ನಾವು ನ್ಯಾಯಾಲಯದ ಮೆಟ್ಟಿಲೇರುತ್ತೇವೆ. ಇದು ಸಂಪೂರ್ಣವಾಗಿ ಸಂವಿಧಾನಕ್ಕೆ ವಿರುದ್ಧವಾಗಿದೆ. ನಮ್ಮ ಸಂವಿಧಾನ ಭಾರತ ಜಾತ್ಯಾತೀತ ರಾಷ್ಟ್ರ ಎಂಬುದನ್ನು ಸ್ಪಷ್ಟ ಪಡಿಸಿದೆ" ಎಂದು ಗೋವಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜೊನ್ ಫರ್ನಾಂಡಿಸ್ ಹೇಳಿದ್ದಾರೆ.