ಬಿಜೆಪಿ ತಮಿಳುನಾಡು ಘಟಕದ ಮುಖ್ಯಸ್ಥ ತಮಿಳಿಸೈ ಸೌಂದರ್ರಾಜನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಮೇ 16 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಕಣಕ್ಕಿಳಿದಿದ್ದು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ನಿನ್ನೆ ಈ ತಮಿಳಿಸೈ ಅವರ ಮೊಬೈಲ್ಗೆ ಈ ಸಂದೇಶ ಬಂದಿದ್ದು ಈ ಎಚ್ಚರಿಕೆಯನ್ನು ಅಲಕ್ಷಿಸಿದರೆ ಜೀವವನ್ನು ತೆಗೆಯುವುದಾಗಿ ಬೆದರಿಕೆ ಒಡ್ಡಲಾಗಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ಸೌಂದರ್ರಾಜನ್ ವಿರುಗಮ್ಬಾಕಮ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.
ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.