ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾದ ಬಿಜೆಪಿ

ಶನಿವಾರ, 14 ಡಿಸೆಂಬರ್ 2019 (10:53 IST)
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ -2019 ಅಂಗೀಕಾರವಾದ ಹಿನ್ನಲೆ ಈ ಬಗ್ಗೆ ಜನಜಾಗೃತಿ ಮೂಡಿಸಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ.



ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರವಾದ ಹಿನ್ನಲೆ ಈ ಕಾಯ್ದೆ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆದಕಾರಣ ಸಿಎಬಿ ಬಗ್ಗೆಧನಾತ್ಮಕ ಅಭಿಪ್ರಾಯ ಮೂಡಿಸಲು ಸಿದ್ಧತೆ ಮಾಡಿದ್ದು, ಅದಕ್ಕಾಗಿ ಮುಂದಿನ ವಾರದಿಂದ ರಾಜ್ಯದಲ್ಲಿ ವಿಚಾರ ಸಂಕಿರಣ, ಕಾರ್ಯಗಾರ, ಸಭೆಗಳ ಮೂಲಕ ಸಿಎಬಿ ಬಗ್ಗೆ ಮಾಹಿತಿ ನೀಡಲು ನಿರ್ಧಾರ ಮಾಡಿದ್ದಾರೆ.


ಆ ಮೂಲಕ ತಮ್ಮ ಕ್ಷೇತ್ರದಲ್ಲಿ ಸಿಎಬಿ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಎಂದು ಸಂಸದರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ,ನಡ್ಡಾ ಸೂಚಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ