ಆಸ್ಸಾಂ ಗೆಲವನ್ನು ಬಣ್ಣಿಸಿದ ಕೇಂದ್ರ ಗೃಹ ಸಚಿವ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ರಾಜನಾಥ್ ಸಿಂಗ್, ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆದಾಗ್ಯೂ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಕೆಲ ಪ್ರದೇಶಗಳಲ್ಲಿ ತೀವ್ರ ಪೈಪೋಟಿ ನೀಡಲಿವೆ. ಆದರೆ, ಬಿಜೆಪಿಗೆ ಬಹುಮತ ದೊರೆಯುವುದು ಖಚಿತ ಎಂದಿದ್ದಾರೆ.
ರಾಜ್ಯದಲ್ಲಿರುವ ಸಣ್ಣ ಸಮುದಾಯವಾಗಲಿ ಅಥವಾ ದೊಡ್ಡ ಸಮುದಾಯವಾಗಲಿ ಪ್ರತಿಯೊಂದು ಸಮುದಾಯದವರು ಬಿಜೆಪಿಗೆ ಮತಹಾಕಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗಮನಾರ್ಹ ವಿಷಯವೆಂದರೆ, ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರವನ್ನು ಸೋಲಿಸಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದೆ.