ಲೋಕಸಭೆಯ ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪುಹಣವನ್ನು ವಾಪಸ್ ತರುವುದಾಗಿ ಬಿಜೆಪಿ ಹೇಳಿಕೊಂಡಿತ್ತು. ಆದರೆ ಇತ್ತೀಚಿಗೆ ಸುಪ್ರೀಂ ಕೋರ್ಟ್ಗೆ ಕೊಟ್ಟ ಹೇಳಿಕೆಯಲ್ಲಿ, ಅವಳಿ ತೆರಿಗೆ ತಪ್ಪಿಸುವಿಕೆ ಒಪ್ಪಂದಗಳು ಕಪ್ಪು ಹಣದ ಕುರಿತು ಮುಂದಿನ ನಡೆಯನ್ನು ಇಡಲು ತೊಡಕಾಗಿದೆ ಎಂದು ಸರ್ಕಾರ ತಿಳಿಸಿತ್ತು.
ಕಳೆದ ವಾರ, ಪತ್ರಿಕಾಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಸರ್ಕಾರ ಯು- ಟರ್ನ್ ತೆಗೆದುಕೊಂಡಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ನಿರಾಕರಿಸಿದ್ದರು. ಭಾರತದ ಕಡೆಗಿನ ಸ್ವತಂತ್ರ ತನಿಖೆ ಸಂದರ್ಭದಲ್ಲಿ ಬ್ಯಾಂಕ್ ಖಾತೆ ಹೆಸರುಗಳು ಸೇರಿದಂತೆ ಯಾವುದೇ ಮಾಹಿತಿಗಳನ್ನು ಎನ್ಡಿಎ ಸರಕಾರ ತಡೆ ಹಿಡಿಯುವುದಿಲ್ಲ ಎಂದು ಅವರು ಹೇಳಿದ್ದರು.