ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ
ತೆಲಂಗಾಣದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘಟನೆಗೆ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.