'ಡಿಸೆಂಬರ್ 1 ರಂದು, ಮಮತಾ ಬ್ಯಾನರ್ಜಿ ಭಾರತೀಯ ಸೇನೆ ವಿರುದ್ಧ ಕಟುವಾಗಿ ವಾಗ್ದಾಳಿ ಮಾಡಿದ್ದರು. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಭಾರತೀಯ ಸೇನೆ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸಿ ಅದರ ವರ್ಚಸ್ಸಿಗೆ ಧಕ್ಕೆ ತಂದಿದೆ. ಭಾರತೀಯ ಸೇನೆ ತಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡುತ್ತಿದ್ದು ಎಂಬುದರ ಮೂಲಕ ಜನರಿಗೆ ತಪ್ಪು ಸಂದೇಶ ನೀಡಲು ಪ್ರಯತ್ನಿಸಿದ್ದರು', ಎಂದು ಶರ್ಮಾ ದೂರಿನಲ್ಲಿ ಹೇಳಿದ್ದಾರೆ.