ಮೃತನನ್ನು ವೆಂಕಟೇಶ್ ಎಂಬುವವರ ಪುತ್ರ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ಶಾಲೆಗೆ ಹೋಗಲು ಇಷ್ಟಪಡದ ಬಾಲಕನಿಗೆ ಪೋಷಕರು ಶಾಲೆಗೆ ಹೋಗುವಂತೆ ಬುದ್ಧಿ ಹೇಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಬುಧವಾರ ತಂದೆತಾಯಿ ಕೂಲಿ ಕೆಲಸಕ್ಕೆ ಹೋದ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿಕೊಂಡು ಬಾಲಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಮೃನ ಪೋಷಕರು ಕೂಲಿ ಕಾರ್ಮಿಕರಾಗಿದ್ದಾರೆ.
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.