ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ದೇವಾಲಯಗಳ ನಗರ ವಾರಣಾಸಿಯ ರಾಜಘಾಟ್ ಸೇತುವೆ ಬಳಿ ಬಾಬಾ ಜೈ ಗುರುದೇವ್ರ ಧಾರ್ಮಿಕ ಸಮಾರಂಭ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ಸುಮಾರು 3000 ಜನರು ಪಾಲ್ಗೊಲ್ಳುವ ನಿರೀಕ್ಷೆ ಇತ್ತು. ಆದರೆ ಬಂದಿದ್ದು ಸುಮಾರು 80,000ಕ್ಕೂ ಹೆಚ್ಚು ಜನ. ಭಕ್ತರ ಮೆರವಣಿಗೆ ಸೇತುವೆ ಮೇಲೆ ಹೋಗುತ್ತಿದ್ದಾಗ ಓರ್ವ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಅಷ್ಟರಲ್ಲಿ ಯಾರೋ ಸೇತುವೆ ಕುಸಿಯುತ್ತಿದೆ ಎಂದು ವದಂತಿ ಹಬ್ಬಿಸಿದ್ದಾರೆ. ಹೀಗಾಗಿ ನೂಕುನುಗ್ಗಲು ಸಂಭವಿಸಿ ಈ ಭೀಕರ ಘಟನೆ ನಡೆದಿದೆ.