ಕೆಲ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕೇಂದ್ರ ಕಚೇರಿ ಎದುರು ಪ್ರಿಯಾಂಕಾ ಲಾವೋ ಕಾಂಗ್ರೆಸ್ ಬಚಾವೋ ಎನ್ನುವ ಘೋಷಣೆ ಕೂಗಿದ್ದಾರೆ. ಸುಮಾರು 200ರಿಂದ 250 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಅದರಲ್ಲೂ ಮುಖ್ಯವಾಗಿ ಮಹಿಳಾ ಕಾರ್ಯಕರ್ತರು ಪ್ರಿಯಾಂಕಾ ಗಾಂಧಿ ಅವರನ್ನು ರಾಜಕಾರಣಕ್ಕೆ ಕರೆತರುವಂತೆ ಒತ್ತಾಯಿಸಿದ್ದಾರೆ. ಪಕ್ಷ ಈಗ ಸಂಕಷ್ಟದ ದಿನಗಳನ್ನು ಎದುರಿಸುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ಪ್ರಿಯಾಂಕಾರನ್ನು ರಾಜಕೀಯ ಸೇರುವಂತೆ ರಾಹುಲ್ಗಾಂಧಿ ಒತ್ತಾಯಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಭಾರಿ ಸೋಲಿನ ಸುಳಿವು ಮೊದಲೇ ಇತ್ತು ಎನ್ನುವಂತೆ ಮಾತನಾಡಿದ ಅವರು, ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ 15 ವರ್ಷ ಮತು ಹರ್ಯಾಣದಲಿ ನಮ್ಮ ಸರ್ಕಾರ 10 ವರ್ಷ ಅಧಿಕಾರ ನಡೆಸಿತ್ತು. ಈಗ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸಿಕ್ಕ ಯಶಸ್ಸಿಗಾಗಿ ನಾನು ಬಿಜೆಪಿಗೆ ಶುಭಾಶಯ ತಿಳಿಸುತ್ತೇನೆ. ಜನರ ವಿಶ್ವಾಸವನ್ನು ಮರುಗಳಿಸಲು ಕಾಂಗ್ರೆಸ್ ಕಠಿಣ ಪರಿಶ್ರಮ ಪಡಲಿದೆ ಎಂದು ಹೇಳಿದ್ದಾರೆ.