ಮತ್ತೆ ಪಾಕ್ ಪಡೆಗಳ ಕ್ಯಾತೆ: ಓರ್ವ ಯೋಧ ಹುತಾತ್ಮ

ಶುಕ್ರವಾರ, 15 ಸೆಪ್ಟಂಬರ್ 2017 (09:01 IST)
ಶ್ರೀನಗರ: ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಕ್ಯಾತೆ ಮುಂದುವರಿಸಿದ್ದು, ಗಡಿ ಭದ್ರತಾ ಪಡೆಯ ಓರ್ವ ಯೋಧನನ್ನು ಹೊಡೆದುರುಳಿಸಿದೆ. ಆರ್ ಎಸ್ ಪುರಾ ಸೆಕ್ಟರ್ ನಲ್ಲಿ ಪಾಕ್ ಪಡೆಗಳು ದಾಳಿ ನಡೆಸಿದ್ದಾರೆ.

 
ದಾಳಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾನೆ. ಐದು ದಿನಗಳ ಹಿಂದಷ್ಟೇ ಪಾಕಿಸ್ತಾನ ಗಡಿ ಉಲ್ಲಂಘಿಸಿ ದಾಳಿ ನಡೆಸಿತ್ತು.

ಅರ್ನಿಯಾ ಪ್ರದೇಶದ ಬಿಎಸ್ಎಫ್ ನೆಲೆಗಳನ್ನು ಗುರಿಯಾಗಿಟ್ಟುಕೊಂಡು ಪಾಕ್ ಸೈನಿಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಓರ್ವ ನಾಗಿರಕನಿಗೆ ಗಾಯವಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇದೀಗ ಗಡಿ ಭದ್ರತಾ ಪಡೆಗಳು ಜಾಗೃತರಾಗಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ.. ಭಾರತ-ಪಾಕಿಸ್ತಾನ ಕಾದಾಡುವುದು ಕ್ರಿಕೆಟ್ ದೊರೆಗಳಿಗೆ ಇಷ್ಟವಾಗ್ತಿಲ್ಲ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ